
ಸೇನೆಯ ಮಹಿಳಾ ಅಧಿಕಾರಿಗಳಿಂದಲೇ ಆಪರೇಷನ್ ಸಿಂಧೂರ್ ಬಗ್ಗೆ ಮಾಹಿತಿ ಕೊಡಿಸುವ ಮೂಲಕ ಭಾರತ, ಸಿಂಧೂರ ಕಸಿದ ಉಗ್ರರಿಗೆ ಮಹಿಳೆಯರಿಂದಲೇ ತಕ್ಕ ಉತ್ತರ ನೀಡಿದೆ.
ಧರ್ಮ ಕೇಳಿ ಹತ್ಯೆ ಮಾಡುವ ಮೂಲಕ ಪಹಲ್ಗಾಮ್ನಲ್ಲಿ 26 ಪ್ರವಾಸಿಗರ ಬಲಿ ಪಡೆದ ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಕೃತ್ಯಕ್ಕೆ ಭಾರತ ಆಪರೇಷನ್ ಸಿಂಧೂರ್ ಮೂಲಕ ತಕ್ಕ ಉತ್ತರ ನೀಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ದೇಶದ ಜನರಿಗೆ ಮಾಹಿತಿ ನೀಡುವುದಕ್ಕಾಗಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಸೇನೆಯ ಮಹಿಳಾ ಅಧಿಕಾರಿಗಳೇ ಈ ಕಾರ್ಯಾಚರಣೆಯ ಬಗ್ಗೆ ದೇಶಕ್ಕೆ ಮಾಹಿತಿ ನೀಡಿದ್ದಾರೆ. ಈ ಮೂಲಕ ಮಹಿಳೆಯ ಸಿಂಧೂರ ಕಸಿದ ಭಯೋತ್ಪಾದಕರಿಗೆ ಮಹಿಳೆಯರೇ ತಿರುಗೇಟು ನೀಡಿದ್ದಾರೆ.
ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಜೊತೆ ಸೇನೆಯ ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ಆಪರೇಷನ್ ಸಿಂಧೂರ್ ಕುರಿತು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಈ ಸುದ್ದಿಗೋಷ್ಠೀಯಲ್ಲಿ ಮೊದಲಿಗೆ ಇದುವರೆಗೆ ಭಯೋತ್ಪಾದಕ ದಾಳಿಯಿಂದ ದೇಶಕ್ಕಾಗ ಸಾವು ನೋವಿಗೆ ಸಂಬಂಧಿ
ಮುಂದಕ್ಕೆ ಓದಿ